Uncategorized

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಭೀಮಪ್ಪ ಗಡಾದ್

Share

ವಿಧಾನಸಭೆ ಚುನಾವಣೆ ವೇಳೆ ವರುಣಾ ಕ್ಷೇತ್ರದ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಆರೋಪವಾಗಿ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ

ಈ ಕುರಿತು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಭೀಮಪ್ಪ ಗಡಾದ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣೆ ಆಯೋಗಕ್ಕೆ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮೇಲೆ ಕ್ರಮ ಜರುಗಿಸಲು ಒತ್ತಾಯ ಮಾಡಿದ್ದೇನೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ದೂರಿನಲ್ಲಿ ಪ್ರಸ್ತಾಪಿಸಿದ್ದೇನೆ ಕೇಂದ್ರ ಚುನಾವಣೆ ಆಯೋಗ ಕ್ರಮ ಕೈಗೊಳ್ಳದಿದ್ರೆ ಕಾನೂನು ಹೋರಾಟ ಮಾಡಲು ನಾನು ಸಿದ್ದನಿದ್ದೇನೆ ದಾಖಲೆ ಸಮೇತ ದೂರು ನೀಡಿದರೂ ರಾಜ್ಯ ಚುನಾವಣೆ ಆಯೋಗ ಕ್ರಮ ಕೈಗೊಳ್ಳುತ್ತಿಲ್ಲ, ‘ದೂರು ಅರ್ಜಿಯ ಕುರಿತು ಭಾರತ ಚುನಾವಣೆ ಆಯೋಗದ ಮಾರ್ಗದರ್ಶನ ಕೋರಲಾಗಿದೆ’ ಎಂದು ಲಿಖಿತ ಉತ್ತರ ನೀಡಿದ್ದಾರೆ ಐರನ್ ಬಾಕ್ಸ್, ಕುಕ್ಕರ್ ಹಂಚಿದ್ದರಿಂದ ನಮ್ಮ ತಂದೆ ಗೆದ್ದಿದ್ದರು ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಭಾಷಣ ಮಾಡಿದ್ರು ಯತೀಂದ್ರ ಸಿದ್ದರಾಮಯ್ಯ ಭಾಷಣದ ವಿಡಿಯೋ ವೈರಲ್ ಆಗಿತ್ತು ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆ ಆಗಿದ್ದು ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಮಾಡುತ್ತಿದ್ದೇನೆ.

ಸೆಪ್ಟೆಂಬರ್ 21ರಂದು ರಾಜ್ಯ ಚುನಾವಣೆ ಆಯೋಗಕ್ಕೆ ಪತ್ರ ಬರೆದಿದ್ವಿ ಅಕ್ಟೋಬರ್ 4ರಂದು ದೂರು ಅರ್ಜಿ ಬಗ್ಗೆ ಭಾರತ ಚುನಾವಣೆ ಆಯೋಗದ ಮಾರ್ಗದರ್ಶನ ಕೇಳಿದ್ದಾಗಿ ಲಿಖಿತ ಉತ್ತರ ನೀಡಿದ್ದಾರೆ ಭಾರತ ಚುನಾವಣೆ ಆಯೋಗದ ಮಾರ್ಗದರ್ಶನಕ್ಕೆ ಬರೆದ ಪತ್ರದ ನಕಲು ಪ್ರತಿ ನೀಡುವಂತೆ ಡಿಸೆಂಬರ್ 1ರಂದು ರಾಜ್ಯ ಚುನಾವಣೆ ಆಯೋಗಕ್ಕೆ ಪತ್ರ ಬರೆದಿದ್ವಿ ಆಗ ಭಾರತ ಚುನಾವಣೆ ಆಯೋಗಕ್ಕೆ ಕೋರಲಾದ ಮಾರ್ಗದರ್ಶನ ಇನ್ನೂ ಸ್ವೀಕೃತವಾಗಿಲ್ಲ, ಸ್ವೀಕೃತವಾದ ಬಳಿಕ ಮಾಹಿತಿ ನೀಡುವುದಾಗಿ ಲಿಖಿತ ಉತ್ತರ ನೀಡಿದ್ದಾರೆ
ಹೀಗಾಗಿ ಕೇಂದ್ರ ಚುನಾವಣೆ ಆಯೋಗಕ್ಕೆ ಇ-ಮೇಲ್ ಮೂಲಕ ಹಾಗೂ ಪೋಸ್ಟ್ ಮೂಲಕ ದೂರು ನೀಡಿದ್ದೇನೆ ಎಂದರು .

ಸದ್ಯ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮಾಡಿರುವ ಆರೋಪಕ್ಕೆ ಯಾವ ರೀತಿ ಕಾನೂನು ಕ್ರಮ ವಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ

ಸ್ಪೆಷಲ್ ಪೊಲಿಟಿಕಲ್ ಬಿರೊ
ಇನ್’ನ್ಯೂಸ್ ಬೆಳಗಾವಿ

Tags: