Uncategorized

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರುತ್ತದೆ : ಕೇಂದ್ರ ಸಚಿವ ಜೋಶಿ

Share

ಪಂಚರಾಜ್ಯ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸಗಡ ಮೂರು ರಾಜ್ಯದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಜನರಿಗೆ ಮಾಡಿದ ಮೋಸದಂತೆ ರಾಜಸ್ಥಾನದಲ್ಲಿ ಮಾಡಿದ್ದಾರೆ ಎಂದರು.

ಕರ್ನಾಟಕ ಸರ್ಕಾರ ಉಚಿತದ ಹೆಸರಿನಲ್ಲಿ ಹೇಳೋದು ಒಂದು ಮಾಡೋದು ಒಂದು ರೀತಿ ಮಾಡತ್ತಿದೆ. ಎಲ್ಲ ಅಭಿವೃದ್ಧಿ ಚಟುವಟಿಕೆಗಳು ಕುಂಟಿತಗೊಂಡಿವೆ. ಇದನ್ನು ಕಾಂಗ್ರೆಸ್ ಶಾಸಕರೇ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಜನರು ರಸ್ತೆ, ಆಸ್ಪತ್ರೆ ಬಗ್ಗೆ ಬೇಡಿಕೆ ಇಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರು ಮಾತ್ರ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ ಎಂದರು‌

ಸದ್ಯ ರಾಜ್ಯದಲ್ಲಿ ಆರ್ಥಿಕ ಅಶಿಸ್ತು ಮೂಡಿದೆ. ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಲಾಗಿದೆ. ಕಾಂಗ್ರೆಸ್ ತನ್ನ ಪಕ್ಷದಲ್ಲಿನ ಆಂತರಿಕ ಜಗಳದಿಂದ ಸಂಪೂರ್ಣವಾಗಿ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಳ್ಳುವಂತೆ ಮಾಡಿದೆ. ಬರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತಾತ್ಕಾಲಿಕ ಪರಿಹಾರವನ್ನು ಕೂಡಾ ಈವರೆಗೆ ನೀಡಿಲ್ಲ. ನಯಾಪೈಸೆಯನ್ನು ಜನರಿಗೆ ಕೊಟ್ಟಿಲ್ಲ. ಕಾಂಗ್ರೆಸ್’ನವರು ಜನರ ಹಿತವನ್ನು ಮರೆತ್ತಿದ್ದಾರೆ. ಅವರು ಸಿಎಂ, ಡಿಸಿಎಂ ಸ್ಥಾನಕ್ಕೆ ಜಗಳದಲ್ಲಿ ಮುಳುಗಿದ್ದಾರೆ. ಈ ಮೂಲಕ ಗೊಂದಲ ಸೃಷ್ಟಿ ಮಾಡಿ ಆರೇ ತಿಂಗಳಲ್ಲಿ ಕಾಂಗ್ರೆಸ್ ಆಡಳಿತ ಅದೋಗತಿಗೆ ಇಳಿದು ಹೋಗಿದೆ ಎಂದು ಕಿಡಿಕಾರಿದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರವಾಗಿ ಮಾತನಾಡಿ, ಈಗಾಗಲೇ ಸಾಮಾಜಿಕ ಜಾಲತಾಣಗಳ ಮೂಲಕ ಬಿ.ವೈ.ವಿಜಯೇಂದ್ರ ನೇಮಕವನ್ನು ಸ್ವಾಗತ ಮಾಡಿದ್ದೇನೆ. ಕೇಂದ್ರದ ನಾಯಕರು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಯುವ ನಾಯಕತ್ವಕ್ಕೆ ಅವಕಾಶ ಮಾಡಿ ಕೊಟ್ಟು ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ತಿಳಿಸಲಾಗಿದೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದರು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 2013 ರಂತೆ ಈ ಬಾರಿಯೂ 25 ಕ್ಕೂ ಹೆಚ್ಚು ಸ್ಥಾನದಲ್ಲಿ ಜಯ ಸಾಧಿಸಲಿದೆ. ಆದರೆ ಕಾಂಗ್ರೆಸ್’ನವರು ಬಾಲೀಶವಾಗಿ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಅರವಿಂದ ಬೆಲ್ಲದ ಅಸಮಾಧಾನ ವಿಚಾರವಾಗಿ ಮಾತನಾಡಿ, ಅವರು ಯಾವ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಗೊತ್ತಿಲ್ಲ. ಅವರ ಜೊತೆ ಮಾತಾಡಿ ಗೊಂದಲ ಪರಿಹರಿಸಲಾಗುವುದು ಎಂದು ತಿಳಿಸಿದರು.

Tags: