Uncategorized

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ: ಬಿಜೆಪಿ ಕಾರ್ಯಕರ್ತರು ಪೊಲೀಸ ವಶಕ್ಕೆ

Share

ಸಂಸದ ಡಿ. ಕೆ.ಸುರೇಶ ನೀಡಿರುವ ಭಾರತ ವಿಭಜನೆ ಕುರಿತು ದೇಶದ್ರೋಹಿ ಹೇಳಿಕೆ ಖಂಡಿಸಿ ಮತ್ತು ಸಿಎಂ ಸಿದ್ದರಾಮಯ್ಯಅವರು ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿರುವುದನ್ನು ಖಂಡಿಸಿ ವಿಜಯಪುರ ಜಿಲ್ಲೆಯ ಬಿಜೆಪಿ ಯುವ ಮೊರ್ಚಾ ವತಿಯಿಂದ ನಗರದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲಾಯಿತು. ‌ಬ್ಯಾರಿಕೇಡ್ ತಳ್ಳಿ ಕಾಂಗ್ರೆಸ್ ಕಚೇರಿಗೆ ತೆರಳಲು ಬಿಜೆಪಿ ಕಾರ್ಯಕರ್ತರು ಹರಸಾರಹಸ ಪಟ್ಟರು.ಆಗ ಪೊಲೀಸರು ಅವರನ್ನು ತಡೆದರು. ಆಗ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಯುವ ಮೊರ್ಚಾ ಅಧ್ಯಕ್ಷ ಬಸವರಾಜ ಹೂಗಾರ, ಆನಂದ ಮುಚ್ಚಂಡಿ ಹಾಗೂ ಇತರೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ತಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಸಂಸದ ಡಿ.ಕೆ. ಸುರೇಶ ಕ್ಷಮೆ ಕೇಳಬೇಕೆಂಸು ಬಿಜೆಪಿ ಕಾರ್ಯಕರ್ತರ ಒತ್ತಾಯಿಸಿದರು.

Tags: