hubbali

ಕರ್ನಾಟಕ ಬಸ್‌ಗೆ ಮಸಿ ಬಳಿದ ಶಿವಸೇನೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಗರಂ

Share

ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಮರಾಠಿಗರು ಕರ್ನಾಟಕ ಬಸ್‌ಗಳ‌ ಮೇಲೆ ಕಲ್ಲು ತೂರಾಟ ಸೇರಿದಂತೆ ಕನ್ನಡ ವಿರೋಧಿ ಭಾವನೆ ವ್ಯಕ್ತಪಡಿಸಿದ್ದನ್ನ ಖಂಡಿಸಿ ಕರ್ನಾಟಕ ರಕ್ಷಣಾ ‌ವೇದಿಕೆಯ ಪ್ರ‌ವೀಣ ಶೆಟ್ಟಿ ಬಣದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿ ಗೋಕುಲ ರಸ್ತೆಯ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಕರ್ನಾಟಕ ರಕ್ಷಣಾ ‌ವೇದಿಕೆ ಕಾರ್ಯಕರ್ತರು, ಯಾವುದೇ ಕಾರಣಕ್ಕೋ ಮಹಾರಾಷ್ಟ್ರ ಬಸ್ ಬಿಡಲ್ಲ. ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಉದ್ಧಟತನ ಮುಂದುವರೆಸಿದ್ದಾರೆ. ಕರ್ನಾಟಕದ ಮತ್ತೊಂದು ಬಸ್​ಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ನಗರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಕೊಲ್ಲಾಪುರ ಜಿಲ್ಲಾಧ್ಯಕ್ಷ ವಿಜಯ್ ನೇತೃತ್ವದಲ್ಲಿ ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮಾಡಿದ್ದಾರೆ. ಕರ್ನಾಟಕದ ವಿಜಯಪುರ – ಕೊಲ್ಲಾಪುರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗೆ ಮಸಿ ಬಳಿದಿದ್ದಾರೆ. ಈ ವೇಳೆ, ಕರ್ನಾಟಕದ ಬಸ್​ಗೆ ಜೈ ಮಹಾರಾಷ್ಟ್ರ ಅಂತಾ ಬರೆದಿದ್ದು, ಕರ್ನಾಟಕ ಬಸ್‌ಗಳನ್ನ ಕೂಡಲೇ ಬಂದ್ ಮಾಡುವಂತೆ ಘೋಷಣೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಅಲ್ಲದೇ ಶಿವಸೇನೆ ಕಾರ್ಯಕರ್ತರ ಈ ನಡೆಗೆ ಕರ್ನಾಟಕ ರಕ್ಷಣಾ ‌ವೇದಿಕೆ ಮುಖಂಡ ಮಂಜುನಾಥ ಲೂತಿಮಠ ಆಕ್ರೋಶ ವ್ಯಕ್ತಪಡಿಸಿದ್ದು, ಇದೇ ರೀತಿ ಶಿವಸೇನೆ ತನ್ನ ಉದ್ಧಟತನ ಮೆರೆದರೆ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದರು.

 

Tags: