Uncategorized

ಅಂಗನವಾಡಿ ಅಡುಗೆ ಸಹಾಯಕರ ಹಾಗೂ ಬಿಸಿಯೂಟ ಕಾರ್ಮಿಕರ ಪ್ರತಿಭಟನೆ

Share

ಬಿಸಿಯೂಟ ಕಾರ್ಮಿಕರ ಗೌರವ ಧನ‌ ಏರಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಧಾರವಾಡದಲ್ಲಿ ಅಂಗನವಾಡಿ ಅಡುಗೆ ಸಹಾಯಕರು ಹಾಗೂ ಬಿಸಿಯೂಟ ಕಾರ್ಮಿಕರು ರಸ್ತೆಗೆ ಇಳಿದು ಧಾರವಾಡದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದರು.


ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ನೇತೃತ್ವದಲ್ಲಿ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದ, ಮಹಿಳೆಯರು ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆ ಉದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಬಂದ ಕಾರ್ಯಕರ್ತೆಯರು ತಮ್ಮ ಅಸಮಧಾನ ವ್ಯಕ್ತಪಡಿಸಿ, ಅಂಗನವಾಡಿ ಅಡುಗೆ ಸಹಾಯಕರು ಹಾಗೂ ಬಿಸಿಯೂಟ ಕಾರ್ಮಿಕರು ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಬಿಸಿಯೂಟ ಕಾರ್ಮಿಕರಿಗೆ ಮಾಸಿಕ ಗೌರವಧನ 6000 ಸಾವಿರ ನೀಡಬೇಕು. ಬಾಕಿಯಿರುವ ಗೌರವಧನ ಕೂಡಲೇ ಬಿಡುಗಡೆ ಮಾಡಬೇಕು. ವರ್ಷದ 12 ತಿಂಗಳು ಗೌರವಧನ ನೀಡಬೇಕು. ಶಾಸನಬದ್ಧವಾಗಿ ಕಾರ್ಮಿಕರಿಗೆ ಇರುವ ರಜೆ ನೀಡಬೇಕು ಹಾಗೂ ಬಿಸಿಯೂಟ ಕಾರ್ಮಿಕರಿಗೆ ಸಮವಸ್ತ್ರ ನೀಡಬೇಕು ಎಂದು ಒತ್ತಾಯಿಸಿದರು

Tags: