social

ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಮುಂಬೈ ಹುತಾತ್ಮರ ಸ್ಮರಣೆ

Share

ವಿಜಯಪುರ : ಮುಂಬೈ ದಾಳಿಗೆ 14 ರ ಕರಾಳ ದಿನದ ಹಿನ್ನೆಲೆಯಲ್ಲಿ ವಿಜಯಪುರ ನಗರದಲ್ಲಿ ಹತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗಜಾನನ ಮಹಾಮಂಡಳದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಛತ್ರಪತಿ ಶಿವಾಜಿ ಮಹಾರಾಜ ವೃತ್ತದಲ್ಲಿ ಮೊಂಬತ್ತಿ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ವೀರ ಯೋಧರಿಗೆ ಶ್ರದ್ಧಾಪೂರ್ವಕ ನಮನ ಸಲ್ಲಿಸಿ ತ್ಯಾಗ ಬಲಿದಾನಗಳನ್ನು ದೇಶ ಎಂದಿಗೂ ಅಜರಾಮ ಎಂದು ಸ್ಮರಿಸಲಾಯಿತು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ನೂರಾರು ಯುವಕರು ಭಾಗಿಯಾಗಿದ್ದರು.

Tags: