Uncategorized

ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ ಜೋಶಿಯವರಿಗೆ ನೈತಿಕತೆ ಇಲ್ಲ: ಭ್ರಷ್ಟಾಚಾರ ಆಪಾದನೆ ಬಂದು ಜನ ತಿರಸ್ಕರಿಸಿ ನಿಮ್ಮನ್ನು ಮನೆಗೆ ಕಳಿಸಿದ್ದಾರೆ : ಜಗದೀಶ್ ಶೆಟ್ಟರ್…

Share

ಮಾಜಿ ಮುಖ್ಯಮಂತ್ರಿ ಸದಾನಂದಗೌಡರ ಕಾಂಗ್ರೆಸ್ ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ.
ನಾನು ಅವರನ್ನ ಸ‌ಂಪರ್ಕದಲ್ಲಿ ಇಲ್ಲ
ಅವರಗಾಲೇ ಮಾತನಾಡಿದರೇ ಮಾತನಾಡುವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು,ಸದಾನಂದಗೌಡರ ಜೊತೆಗೆ ನಾನು ಯಾವುದೇ ರೀತಿಯ ಮಾತನಾಡಿಲ್ಲ. ಪಂಚ ರಾಜ್ಯಗಳಿಗೆ 1000 ಕೋಟಿ ಹಣ ಸಂಗ್ರಹ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಇದೊಂದು ಆಧಾರ ರಹಿತಿ ಆರೋಪ. ಆದಾಯ ತೆರಿಗೆ ಯಾರ ಕೈಯಲ್ಲಿ ಇದೆ. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಒಬ್ಬ ಜವಾಬ್ದಾರಿಯುತ ನಾಯಕರು.
ಅವರು ಯಾವ ಆಧಾರದ ಮೇಲೆ ಹೇಳಿದರು ಗೊತಿಲ್ಲ. ಈ ಬಗ್ಗೆ ಸ್ಪಷ್ಟತೆ ಮಾಡಬೇಕು. ಆದಾಯ ತೆರಿಗೆ ಇಲಾಖೆ ಯಾರ ಕೈಯಲ್ಲಿ ಇದೆ.
ಕುಸು ಹುಟ್ಟುವ ಮುನ್ನ ಕುಲಾಯಿ ಹೊಲಿಸಿದ ಹಾಗೇ , ಯಾವುದೇ ಆದಾಯ ತೆರಿಗೆ ಇಲಾಖೆಯಿಂದ ಮಾಹಿತಿ ಕೊಟ್ಟಿಲ್ಲ. ಸಂಬಂಧಿಸಿದ ಇಲಾಖೆ ಯಾರ ಹಣ ಅಂತ ಮಾಹಿತಿ ಕೊಡಲಿ. ಅದು ಯಾರಿಗೆ ಸೇರಿದ್ದು ಮೊದಲು ಹೇಳಲಿ. ನಂತರ ಅದರ ಬಗ್ಗೆ ಚರ್ಚೆ ಆಗಲಿ ಎಂದರು.

ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,
ಅದನ್ನ ರಾಜ್ಯಾಧ್ಯಕ್ಷರು ವಿಚಾರ ಮಾಡುತ್ತಾರೆ. ಅಲ್ಲಿನ ಸ್ಥಳಿಯ ಸಮಸ್ಯೆ ಅದನ್ನ ಬಗೆಹರಿಸುವ ಕೆಲಸ ಅವರು ಮಾಡುತ್ತಾರೆ ಎಂದರು.

ಕೆಪಿಸಿಸಿ ಕರೆಪ್ಷನ್ ಕಮಿಟಿ ಎಂಬ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ,
ಅದರ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ ನಿಮಗೆ. ನಿಮ್ಮ ಮೇಲೆ ಭ್ರಷ್ಟಾಚಾರ ಆಪಾದನೆ ಬಂದು ಜನ ತಿರಸ್ಕರಿಸಿ ನಿಮ್ಮನ್ನು ಮನೆಗೆ ಕಳಿಸಿದ್ದಾರೆ. ಈಗ ನಿಮಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಕ್ಕೆ ಏನು ಹಕ್ಕಿದೆ ಎಂದು ತಿರುಗೇಟು ನೀಡಿದರು.

ಗುತ್ತಿಗೆದಾರರ ಮನೆಯಲ್ಲೇ ಹಣ ಸಿಕ್ಕ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ಸಂಘ ಬೇರೆ, ವ್ಯಕ್ತಿ ಬೇರೆ. ಸಂಘ ಹೋರಾಟ ಮಾಡಿದೆ.
ವೈಯಕ್ತಿಕವಾಗಿ ಹಾಗೂ ಸಂಘ ಎರಡನ್ನೂ ಹೋಲಿಕೆ ಮಾಡಲು ಆಗಲ್ಲ. ಎಲ್ಲಾದರೂ ಹಣದ ಬಗ್ಗೆ ಸಂಪೂರ್ಣ ತನಿಖೆ ಆಗಲಿ .
ತಪ್ಪು ಮಾಡಿದವರ ಮೇಲೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಿ. ಅದು ಬರೋಕ್ಕೂ ಮುಂಚೆನೇ ಸಿಬಿಐ ತನಿಖೆ ಅಂತಾರೆ .
ಉಚಿತವಾಗಿ ವಿದ್ಯುತ್ ಕೊಡುವುದರಿಂದ ಲೋಡ್ ಶೆಡ್ಡಿಂಗ್ ಆಗೋದಿಲ್ಲ. ಮಳೆ ಇಲ್ಲ, ಮಳೆ ನೀರು ಇಲ್ಲದೆ ವಿದ್ಯುತ್ ಉತ್ಪಾದನೆ ಆಗಿಲ್ಲ. ಉಚಿತವಾಗಿ ಕೊಟ್ರೆ ರಾಜ್ಯ ಬಜೆಟ್ ನಿಂದ ಹಣ ಕೊಡ್ತಾರೆ.
ವಿದ್ಯುತ್ ಇಲ್ಲಾ ಅಂದ್ರೆ, ನೀರು ಇಲ್ಲದಕ್ಕೆ ಆಗ್ತಿಲ್ಲ ಎಂದರು.

ಜೋಶಿ ಕೇಂದ್ರದಿಂದ ಕಲ್ಲಿದ್ದಲು ಕೊಟ್ಟಿದ್ದೀವಿ ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿ,ಎಲ್ಲಾ ಸರ್ಕಾರ ಇದ್ದಾಗಲೂ ಹೆಸ್ಕಾಂ, ಬೆಸ್ಕಾಮ್ ಎಲ್ಲಾ ಲಾಸ್ ನಲ್ಲೆ ಇವೆ. ಬಿಜೆಪಿ ಸರ್ಕಾರ ಇದ್ದಾಗ ಏನು ಲಾಭದಲ್ಲಿತ್ತಾ? ಯಾವಾಗಲೂ ಪರಿಸ್ಥಿತಿ ಹಾಗೇ ಇತ್ತು. ಸಾಲ ತಗೊಂಡೆ ಮಾಡೋದು ಎಂದರು.

ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರತಿಭಟನೆ ಮಾಡಲು ನಿಮಗೇನು ನೈತಿಕತೆ ಇದೆ.
ಕಳೆದ ಬಾರಿ ಬೊಮ್ಮಾಯಿ ಸರ್ಕಾರಕ್ಕೂ ಭ್ರಷ್ಟಾಚಾರದ ಆರೋಪ ಬಂತು.
40%, ಪೇ ಸಿಎಂ ಎಲ್ಲಾ ಕಡೆಗಳಲ್ಲೂ ಭ್ರಷ್ಟಾಚಾರ ನಡಿತಾ ಇದೆ ಅಂತ ಜನ ಮಾತಾಡಲಿಕ್ಕೆ ಶುರು ಮಾಡಿದರು.
ಗುತ್ತಿಗೆದಾರರು ಆರೋಪವನ್ನು ಮಾಡಿದರು. ನಿಮಗೆ ಒಬ್ಬ ವಿರೋಧ ಪಕ್ಷದ ನಾಯಕನನ್ನು ಮಾಡಲಿಕ್ಕೆ ಆಗಲಿಲ್ಲ. ಯಾರ ನೇತೃತ್ವದಲ್ಲಿ ಪ್ರತಿಭಟನೆ ಮಾಡ್ತೀರಿ ನೀವು?
ನಿಮ್ಮ ವಿರುದ್ಧ ಪಕ್ಷದ ನಾಯಕ ಯಾರು? ಸುಮ್ಮನ್ನೆ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡೋದ್ರಲ್ಲಿ ಅರ್ಥ ಇಲ್ಲ ಎಂದರು.

ಇಸ್ರೇಲ್ ಪ್ಯಾಲೆಸ್ಟಿನ್ ಯುದ್ಧ, ಕಾಂಗ್ರೆಸ್ ನಿಲುವಿನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,
ಇಸ್ರೇಲ್, ಪ್ಯಾಲೆಸ್ಟಿನ್ ಇದು ಬಹಳ ವರ್ಷಗಳಿಂದ ನಡೆದುಕೊಂಡು ಬಂದಂತದ್ದು. ಇತಿಹಾಸ ನೋಡಿದ್ರೆ ಮಹಾತ್ಮ ಗಾಂಧಿಯವರೇ ಪ್ಯಾಲೆಸ್ಟಿನ್ ಗೆ ಬೆಂಬಲ ನೀಡಿದರು.
ಅಟಲ್ ಬಿಹಾರಿ ವಾಜಪೇಯಿ ಅವರು ಕೂಡ ಪ್ಯಾಲೆಸ್ಟಿನ್ ಗೆ ಬೆಂಬಲ ನೀಡಿದ್ದರು.
ಒಂದೊಂದು ಸಮಯದಲ್ಲಿ ಒಂದೊಂದು ರೀತಿ ನೀತಿ ಬದಲಾವಣೆ ಆಗುತ್ತೆ.
ಇಸ್ರೇಲ್ ಪ್ಯಾಲೆಸ್ಟಿನ್ ಯುದ್ಧ ಮಾಡ್ತಾ ಇದ್ದಾರೆ. ರಿಸಲ್ಟ್ ಏನ್ ಬರುತ್ತೆ ನೋಡೋಣ.
ವಿದೇಶಿ ನೀತಿ ಬಗ್ಗೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಕೂತು ಚರ್ಚೆ ಮಾಡಬೇಕು. ನಮ್ಮ ನಿಲುವು ಏನು ಎಂಬುದನ್ನು ನಿರ್ಧಾರ ಮಾಡಬೇಕು.
ಆ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕಲ್ಲಾ?
ಇಲ್ಲಿ ತೆಗೆದುಕೊಳ್ಳುವಂತಹ ನಿರ್ಧಾರದಿಂದ ಅಲ್ಲಿ ಏನೂ ಆಗುವುದಿಲ್ಲ ಎಂದರು.

Tags: