Uncategorized

ಅಂಬೇಡ್ಕರ್ ಅವರಿಗೆ ಅಪಮಾನ ಖಂಡಿಸಿ ನ್ಯಾ.ಮಲ್ಲಿಕಾರ್ಜುನಗೌಡ ಪ್ರತಿಕೃತಿ ದಹನ

Share

ಗಣರಾಜ್ಯೋತ್ಸವ ದಿನಾಚರಣೆಯ ದಿನದಂದು ರಾಯಚೂರು ಜಿಲ್ಲೆಯ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಾಡಿರುವ ಅಪಮಾನ ಖಂಡಿಸಿ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಹೌದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಯಚೂರು ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಮಾಡಿರುವ ಅಪಮಾನದ ವಿರುದ್ಧ ಜನ ಸಿಡಿದೆದ್ದಿದ್ದಾರೆ. ರಾಜ್ಯದ ವಿವಿಧ ಕಡೆ ಪ್ರತಿಭಟನೆ ನಡೆಯುತ್ತಿದ್ದು, ಅದೇ ರೀತಿ ಚಿಕ್ಕೋಡಿ ತಾಲೂಕಿನ ಇಂಗಳಿಯಲ್ಲಿ ಮಲ್ಲಿಕಾರ್ಜುನಗೌಡ ಅವರ ಪ್ರತಿಕೃತಿಯನ್ನು ಊರಿನ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮಾಡಿ ದಿಕ್ಕಾರ ಕೂಗಲಾಯಿತು. ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಮಲ್ಲಿಕಾರ್ಜುನಗೌಡ ಅವರ ಪ್ರತಿಕೃತಿಗೆ ದಲಿತ ಮಹಿಳೆಯರು ಪ್ರತಿಕೃತಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದರು.

ಇದೇ ಸಂದರ್ಭದಲ್ಲಿ ಪ್ರತಿಭಟನೆಗಾರರು ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಮಲ್ಲಿಕಾರ್ಜುನಗೌಡರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪೆÇೀಪಟ ಕಾಂಬಳೆ, ಪ್ರತಾಪ ಕಾಂಬಳೆ, ರಾಹುಲ್ ಶಿಂಗೆ, ಮಹಾದೇವ ಐವಳ್ಳಿ, ಸುನೀಲ ಸುಲ್ತಾನಪೂರೆ, ಪ್ರತಿಭಾ ಶಾಸ್ತ್ರಿ, ಸ್ವಾತಿ ಕೋಳಿ, ಗೌರಾ ಶಾಸ್ತ್ರಿ, ವಿನಯಶ್ರೀ ಶಿಂಗೆ, ದೀಪಾ ಶಿಂಗೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags: